ಮೈಸೂರು,ಜ. 14 – ವೇಶ್ಯವಾಟಿಕೆ, ಮಾನವ ಕಳ್ಳಸಾಗಣೆ, ಅನೈತಿಕ ದಂಧೆ ಹಾಗೂ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್ ಕೆ.ಎಸ್. ಮಂಜುನಾಥ್ನನ್ನು ಮೈಸೂರಿನ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಶನಿವಾರ ಆದೇಶ ಹೊರಡಿಸಿದೆ.
ಶುಕ್ರವಾರ ಗುಜರಾತ್ ನಲ್ಲಿ ಬಂಧನಕ್ಕೊಳಗಾಗಿದ್ದ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಶನಿವಾರ ನಗರದ ವಿವಿ ಮೊಹಲ್ಲಾದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.
ವಿಚಾರಣೆ ನಡೆಸಿದ ನ್ಯಾ.ಗುರುರಾಜ್ ಸೋಮಕ್ಕಲವರ್ ಅವರು ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಳೆದ 11 ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಗಾಗಿ ಬಲೆ ಬೀಸಿದ ಮೈಸೂರು ಪೊಲೀಸರು ನಿನ್ನೆ ಗುಜರಾತ್ ನಲ್ಲಿ ಬಂಧಿಸಿದ್ದರು.
Advertisements