ಅಧಿವೇಶನದಲ್ಲಿ ಅದಾನಿ ಗ್ರೂಪ್ ಬಗ್ಗೆ ಚರ್ಚೆಗೆ ಸರ್ವಪಕ್ಷಗಳ ಸಭೆಯಲ್ಲಿ ಪ್ರತಿಪಕ್ಷಗಳ ಒತ್ತಾಯ

0
38
ನವದೆಹಲಿ, ಜ. 30 –ಸಂಸತ್ತಿನ ಬಜೆಟ್ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ನಿಯಮಗಳ ಅಡಿಯಲ್ಲಿ ಪ್ರತಿಯೊಂದು ವಿಷಯವನ್ನು ಚರ್ಚಿಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಹೇಳಿದೆ ಮತ್ತು  ಕಲಾಪವನ್ನು ಸುಗಮವಾಗಿ ನಡೆಸಲು ಪ್ರತಿಪಕ್ಷಗಳ ಸಹಕಾರ ಕೋರಿದೆ.
ಸೋಮವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ಆರ್‌ಜೆಡಿಯ ಮನೋಜ್ ಝಾ, ಡಿಎಂಕೆ, ಎಡಪಕ್ಷಗಳು ಮತ್ತು ಇತರರು ಅದಾನಿ ಗ್ರೂಪ್ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಧಿವೇಶನದಲ್ಲಿ ಸಂಸತ್ತಿನಲ್ಲಿ ಈ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ನ ವರದಿಯ ಬಳಿಕ ಅದಾನಿ ಸಮೂಹಕ್ಕೆ ಸೇರಿದ ಕಂಪನಿಗಳ ಷೇರುಗಳು ಒಂದೇ ಸಮನೆ ಕುಸಿತ ಕಾಣುತ್ತಿದ್ದು, ಈ ಕಂಪನಿಗಳಲ್ಲಿ ಹೂಡಿಕೆ ಮಾಡಿದವರೂ ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಆದರೆ ಹಿಂಡನ್‌ಬರ್ಗ್‌ ರಿಸರ್ಚ್‌ ವರದಿಯನ್ನು ಅದಾನಿ ಗ್ರೂಪ್ ಸ್ಪಷ್ಟವಾಗಿ ತಳ್ಳಿಹಾಕಿದೆ.
ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ಸರ್ಕಾರ ಸೋಮವಾರ ಕರೆದಿದ್ದ ಸರ್ವಪಕ್ಷ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಸಂಸತ್ತಿನಲ್ಲಿ ಪ್ರತಿಯೊಂದು ವಿಷಯದ ಬಗ್ಗೆ ನಿಯಮಗಳ ಅಡಿಯಲ್ಲಿ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು. ಸದನವನ್ನು ಸುಗಮವಾಗಿ ನಡೆಸಲು ನಾವು ಪ್ರತಿಪಕ್ಷಗಳ ಸಹಕಾರವನ್ನು ಕೋರುತ್ತೇವೆ ಎಂದು ಹೇಳಿದರು.
Advertisements

LEAVE A REPLY

Please enter your comment!
Please enter your name here