ಭಾರತಕ್ಕೆ ಮತ್ತೆ ಅಂಫಾನ್ ಭೀತಿ: ಜೂ. 3ಕ್ಕೆ ಮಹಾರಾಷ್ಟ್ರ, ಗುಜರಾತ್‌ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ

0
72

ನವದೆಹಲಿ: ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ವ್ಯಾಪಕ ಹಾನಿ ಮಾಡಿದ್ದ ಅಂಫಾನ್ ಚಂಡಮಾರುತ ದುರಂತ ಹಸಿರಾಗಿರುವಂತೆಯೇ ಇತ್ತ ಭಾರತಕ್ಕೆ ಮತ್ತೆ ಚಂಡಮಾರುತ ಭೀತಿ ಆರಂಭವಾಗಿದೆ.

ಹೌದು… ಮುಂದಿನ ಎರಡು ಮೂರು ದಿನಗಳಲ್ಲಿ ಗುಜರಾತ್ ಮತ್ತು ಉತ್ತರ ಮಹಾರಾಷ್ಟ್ರ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭಾನುವಾರ ತಿಳಿಸಿದೆ. ಜೂನ್ 3ರಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಮುಂಬೈ  ಮೂಲದ ಪ್ರಾದೇಶಿಕ ಹವಾಮಾನ ಕೇಂದ್ರವು ಚಂಡಮಾರುತದ ಬೆಳವಣಿಗೆಗಳ ಮತ್ತು ತೀವ್ರತೆ ಮೇಲೆ ನಿಗಾ ಇರಿಸಿದೆ.

ಆಗ್ನೇಯ, ಪೂರ್ವ ಕೇಂದ್ರ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ. ಇದು ಜೂನ್ 3ರ ವೇಳೆಗೆ ಚಂಡಮಾರುತ ಉತ್ತರ ಮಹಾರಾಷ್ಟ್ರ ಮತ್ತು  ಗುಜರಾತ್ ಕರಾವಳಿಗೆ ಅಪ್ಪಳಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here